ಲೈಸನ್ಸ್ ಇಲ್ಲದೆ ಕೋವಿ ಹೊಂದಲು ಕೊಡವರಿಗೆ ಅವಕಾಶ..!! ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್*_

_*ಲೈಸನ್ಸ್ ಇಲ್ಲದೆ ಕೋವಿ ಹೊಂದಲು ಕೊಡವರಿಗೆ ಅವಕಾಶ..!! ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್*_
_*********************************_
_Consumer News
_*********************************_
_ಕೊಡಗಿನ ಜನರ ಸಂಸ್ಕೃತಿಯ ಭಾಗ ಕೋವಿ.ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯತಿಯ ಅನುಮತಿಯಿದೆ. ಕೊಡಗಿನ ಜನರ ಹಬ್ಬ-ಹರಿದಿನ, ಹುಟ್ಟು-ಸಾವು, ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ.ಬಂದೂಕು ಕೊಡವರಿಗೆ ಕೇವಲ ಒಂದು ಆಯುಧವಲ್ಲ.ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ.ಕೊಡವರಲ್ಲಿ ಕೋವಿಗೆ ಪೂಜ್ಯ ಭಾವನೆಯಿದೆ.ಪವಿತ್ರ ಸ್ಥಾನವಿದೆ._

_ಹಾಗೆಯೇ ಇದೀಗ ಪರವಾನಗಿ ಇಲ್ಲದೆ ಬಂದೂಕುಗಳನ್ನು ಹೊಂದಲು ಮತ್ತು ಸಾಗಿಸಲು ಕೊಡವ ಸಮುದಾಯದವರಿಗೆ ನೀಡಿದ ಅವಕಾಶವನ್ನು ಪ್ರಶ್ನೆ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ಏನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ._

_ಕೊಡವರಿಗೆ ನೀಡಿದ ಅನುಮತಿ ಸಾಂವಿಧಾನಿಕ ಸಿಂಧುತ್ವ ಹೊಂದಿದೆ. ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ನಿವೃತ್ತ ಕ್ಯಾಪ್ಟನ್ ಚೇತನ ವೈ.ಕೆ ಎನ್ನುವವರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಈ ಸಂಬಂಧ ಉತ್ತರಿಸಲು ರಾಜ್ಯ ಸರಕಾರಕ್ಕೆ ನೋಟಿಸ್ ಸೂಚಿಸಿದೆ._

_ಜಾತಿ,ಜನಾಂಗದ ಪೂರ್ವಿಕರ ಭೂ ಒಡೆತನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ.ಇದು ಸಂವಿಧಾನದ 14,15 ಮತ್ತು 21 ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್ 41ರ ಪ್ರಕಾರ, ಸಾರ್ವಜನಿಕ ಹಿತಾಸಕ್ತಿಯಿಂದ ಮಾತ್ರ ಶಸ್ತ್ರಾಸ್ತ್ರ ಪರವಾನಗಿ ಪಡೆಯುವುದರಿಂದ ವಿನಾಯಿತಿ ನೀಡಬಹುದು. ಆದರೆ,ಕೊಡುವ ಸಮುದಾಯಕ್ಕೆ ಅಂತಹ ವಿನಾಯಿತಿ ನೀಡುವ ಕುರಿತು ಅಧಿಸೂಚನೆಯಲ್ಲಿ ಯಾವುದೇ ಕಾರಣವನ್ನು ನೀಡಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ._

_ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜಮ್ಮಾ ಹಿಡುವಳಿದಾರರು. ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯತಿ ಕೆಲವು ನಿಯಮಗಳು ಮತ್ತು ಷರತ್ತುಗಳು ಒಳಪಟ್ಟಿರುತ್ತದೆ. ಆದರಿಂದ ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ಆದೇಶದಲ್ಲಿ ತಿಳಿಸಿತ್ತು._

Related Posts